ವಾಯುಪಡೆ ಹೆಲಿಕಾಪ್ಟರ್ ಪತನ: ಸೇನಾ ಸಿಬ್ಬಂದಿಗಳ ಮುಖ್ಯಸ್ಥ ಜ| ಬಿಪಿನ್ ರಾವತ್ ಸಹಿತ 14 ಮಂದಿ ಪ್ರಯಾಣಿಸುತ್ತಿದ್ದಾಗ ದುರ್ಘಟನೆ

Ad Code

ವಾಯುಪಡೆ ಹೆಲಿಕಾಪ್ಟರ್ ಪತನ: ಸೇನಾ ಸಿಬ್ಬಂದಿಗಳ ಮುಖ್ಯಸ್ಥ ಜ| ಬಿಪಿನ್ ರಾವತ್ ಸಹಿತ 14 ಮಂದಿ ಪ್ರಯಾಣಿಸುತ್ತಿದ್ದಾಗ ದುರ್ಘಟನೆ




ಚೆನ್ನೈ: ಸಶಸ್ತ್ರ ಪಡೆಗಳ ಮುಖ್ಯಸ್ಥರಾದ ಜನರಲ್ ಬಿಪಿನ್ ರಾವತ್‌ ಸಹಿತ 14 ಮಂದಿ ಸೇನಾಧಿಕಾರಿಗಳು ಪ್ರಯಾಣಿಸುತ್ತಿದ್ದ ಭಾರತೀಯ ವಾಯುಪಡೆಯ ಎಂಐ-17ವಿ5 ಹೆಲಿಕಾಪ್ಟರ್‌ ತಮಿಳುನಾಡಿನ ಊಟಿ ಸಮೀಪ ನೀಲಗಿರಿ ಬೆಟ್ಟಗಳ ಪ್ರದೇಶದ ಕೂನೂರಿನ ಬಳಿ ಪತನಗೊಂಡಿದೆ.

ಹೆಲಿಕಾಪ್ಟರ್‌ ಸೂಲೂರ್ ವಾಯುನೆಲೆಯಿಂದ ವೆಲ್ಲಿಂಗ್ಟನ್‌ನ ಡಿಫೆನ್ಸ್‌ ಸರ್ವಿಸಸ್‌ ಕಾಲೇಜ್‌ (ಸಿಡಿಸಿ) ಗೆ ತೆರಳುತ್ತಿದ್ದ ಸಂದರ್ಭದಲ್ಲಿ ಈ ಅಪಘಾತ ಸಂಭವಿಸಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ತಮಿಳುನಾಡು ಅರಣ್ಯ ಸಚಿವ ಕೆ. ರಾಮಚಂದ್ರನ್‌ ಸ್ಥಳಕ್ಕೆ ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆಯ ನೇತೃತ್ವ ವಹಿಸಿದ್ದಾರೆ.

ತುರ್ತು ರಕ್ಷಣಾ ತಂಡಗಳು ಸ್ಥಳದಲ್ಲಿ ಕಾರ್ಯಾಚರಣೆ ನಡೆಸಿದ್ದು, ದುರಂತ ಸ್ಥಳದಿಂದ 7 ಮೃತದೇಹಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ.

ಹೆಲಿಕಾಪ್ಟರ್‌ನಲ್ಲಿದ್ದ ಮೂವರು ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಮೃತಪಟ್ಟವರನ್ನು ಗುರುತಿಸುವ ಕಾರ್ಯ ಪ್ರಗತಿಯಲ್ಲಿದೆ.


ಭೂಸೇನಾ ಮುಖ್ಯಸ್ಥರಾದ ಜನರಲ್‌  ಎಂ.ಎಂ ನರವಣೆ ಅವರು ಘಟನೆಯ ಕುರಿತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ವಿವರಣೆ ನೀಡಿದ್ದಾರೆ. ಕೂಡಲೇ ಸಚಿವರು ಸಿಡಿಎಸ್‌ ಬಿಪಿನ್ ರಾವತ್ ಅವರ ನಿವಾಸಕ್ಕೆ ಧಾವಿಸಿದ್ದಾರೆ.

ಕೂನೂರಿನಿಂದ 7 ಕಿ.ಮೀ ದೂರದ ಜನವಸತಿ ಪ್ರದೇಶವಾದ ಕಟ್ಟೇರಿ ಎಂಬಲ್ಲಿ ಚಹಾ ತೋಟಗಳ ನಡುವೆ ಹೆಲಿಕಾಪ್ಟರ್‌ ಪತನಗೊಂಡಿದೆ.

ಘಟನೆ ಕುರಿತು ತೀವ್ರ ಆಘಾತ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಎ>ಕೆ ಸ್ಟಾಲಿನ್‌, ರಕ್ಷಣಾ ಕಾರ್ಯಳಿಗೆ ಅಗತ್ಯವಿರುವ ಎಲ್ಲ ಸಹಾಯ ಒದಗಿಸುವಂತೆ ಸ್ಥಳೀಯಾಡಳಿತಕ್ಕೆ ಆದೇಶ ನೀಡಿದ್ದಾರೆ.

ದಟ್ಟ ಮಂಜಿನಿಂದಾಗಿ ಗೋಚರತೆ ಕಡಿಮೆಯಿತ್ತು. ಹೀಗಾಗಿ ಹೆಲಿಕಾಪ್ಟರ್‌ ದೊಡ್ಡ ಮರವೊಂದಕ್ಕೆ ಡಿಕ್ಕಿ ಹೊಡೆದು ಪತನಗೊಂಡಿರಬೇಕೆಂದು ಸಾಂದರ್ಭಿಕ ಸನ್ನಿವೇಶಗಳಿಂದ ಊಹಿಸಲಾಗಿದೆ.



Post a Comment

0 Comments