ಠೇವಣಿದಾರರ ಹಿತಾಸಕ್ತಿ ಕಾಯಲು ಬದ್ಧ: ಪ್ರಧಾನಿ ಮೋದಿ

Ad Code

ಠೇವಣಿದಾರರ ಹಿತಾಸಕ್ತಿ ಕಾಯಲು ಬದ್ಧ: ಪ್ರಧಾನಿ ಮೋದಿ



ಹೊಸದಿಲ್ಲಿ: ಠೇವಣಿದಾರರ ಹಿತಾಸಕ್ತಿ ಕಾಪಾಡಲು ಯಾವಾಗಲೂ ಕೇಂದ್ರ ಸರ್ಕಾರ ಬದ್ಧವಾಗಿರುತ್ತದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ದೇಶದಲ್ಲಿ ಇದುವರೆಗೆ 1 ಲಕ್ಷ ಠೇವಣಿದಾರರಿಗೆ ಅವರ 1,300  ಕೋಟಿ ರೂ. ಮೊತ್ತವನ್ನು ಹಿಂತಿರುಗಿಸಲಾಗಿದೆ ಎಂದು ತಿಳಿಸಿದ್ದಾರೆ.

ಹೊಸದಿಲ್ಲಿಯಲ್ಲಿ ಭಾನುವಾರ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಠೇವಣಿದಾರರ ವಿಮೆ ಮತ್ತು ಸಾಲ ಖಾತರಿ ಮಸೂದೆ 2021 ಕ್ಕೆ ಸಂಸತ್ತು ಅಗಸ್ಟ್ ನಲ್ಲಿ ಅನುಮೋದನೆ ನೀಡಲಾಗಿತ್ತು. 

ತಾನು ಗುಜರಾತ್ ಮುಖ್ಯಮಂತ್ರಿಯಾಗಿದ್ದ ವೇಳೆ ಬ್ಯಾಂಕೊಂದು ಸಂಕಷ್ಟಕ್ಕೆ ಈಡಾಗಿತ್ತು. ಆ ಸಂದರ್ಭದಲ್ಲಿಯೇ ತಾನು ಠೇವಣಿ ವಿಮೆ ಮೊತ್ತವನ್ನು 1 ಲಕ್ಷ ರೂಪಾಯಿಯಿಂದ 5 ಲಕ್ಷ ರೂ. ಗೆ ಏರಿಕೆ ಮಾಡುವಂತೆ ಕೇಂದ್ರಕ್ಕೆ ಮನವಿ ಮಾಡಿದ್ದೆ ಎಂದು ಪ್ರಧಾನಿ ಮೋದಿ ನೆನಪಿಸಿಕೊಂಡರು.  


Post a Comment

0 Comments