ಸದ್ಯಕ್ಕೆ ಪ್ರತಿಭಟನೆಯನ್ನು ಸ್ಥಗಿತಗೊಳಿಸಲು ನಿರ್ಧರಿಸಿದ ರೈತರು ಈ ಚಳುವಳಿಯನ್ನು ಇಲ್ಲಿಗೆ ನಿಲ್ಲಿಸುವುದಿಲ್ಲ. ಇದು ತಾತ್ಕಾಲಿಕ ಅಮಾನತು ಅಷ್ಟೆ" ಎಂದು ರಾಜೇವಾಲ್ ಹೇಳಿದ್ದಾರೆ.
ಹೆಲಿಕಾಪ್ಟರ್ ಅಪಘಾತದಲ್ಲಿ ನಿಧನರಾದ ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಬಿಪಿನ್ ರಾವತ್ ಅವರ ಅಂತ್ಯಕ್ರಿಯೆಯನ್ನು ಡಿಸೆಂಬರ್ 10 ನಿಗದಿಪಡಿಸಿದ ಹಿನ್ನೆಲೆ ಡಿಸೆಂಬರ್ 11ರಂದು ಆಂದೋಲನಕ್ಕೆ ವಿರಾಮ ಕೊಡಲಾಗುವುದು ಎಂದು ರೈತರು ತಿಳಿಸಿದ್ದಾರೆ.
ಆದರೆ ಎಸ್.ಕೆ.ಎಮ್ ರಾಷ್ಟ್ರೀಯ ಸಮಾವೇಶವು ಜನವರಿ 15 ರಂದು ಮತ್ತೆ ಹೊಸದಿಲ್ಲಿಯಲ್ಲಿ ಸಭೆ ಸೇರಲು ನಿರ್ಧರಿಸಿದೆ.
ಪ್ರತಿಭಟನಾಕಾರರ ಮೇಲಿನ ಪ್ರಕರಣಗಳನ್ನು ಹಿಂಪಡೆಯುವಂತೆ ಮತ್ತು ಸತ್ತವರ ಕುಟುಂಬಕ್ಕೆ ಪರಿಹಾರ ಒದಗಿಸುವಂತೆ ಸರ್ಕಾರ ತನ್ನ ಬದ್ಧತೆಯನ್ನು ಉಳಿಸಿಕೊಂಡಿದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಬೇಕಾಗಿದೆ ಎಂದು ರೈತರು ತಮ್ಮ ಅಭಿಪ್ರಾಯವನ್ನು ಹೇಳಿಕೊಂಡಿದ್ದಾರೆ. ಮತ್ತು ಬಾಕಿ ಇರುವ ತಮ್ಮ ಬೇಡಿಕೆಗಳನ್ನು ಶೀಘ್ರವಾಗಿ ಅನುಷ್ಠಾನಕ್ಕೆ ತರುವಂತೆ ಕೇಂದ್ರಕ್ಕೆ ಒತ್ತಾಯಿಸಿದ್ದಾರೆ.
0 Comments